by 1 on | 2024-01-22 15:05:55
Share: Facebook | Twitter | Whatsapp | Linkedin | Visits: 268
ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಇಂದು (ಜನವರಿ 22) ನೂತನ ರಾಮಮಂದಿರದಲ್ಲಿ ನಡೆಯುವ ರಾಮಲಲ್ಲಾ ಪ್ರತಿಷ್ಠಾಪನೆಯಲ್ಲಿ ಭಾಗವಹಿಸುವುದಿಲ್ಲ ಕಾರಣ ಚಳಿ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ಅವರು ತಮ್ಮ ಅಯೋಧ್ಯೆ ಭೇಟಿಯನ್ನು ರದ್ದುಗೊಳಿಸಿದ್ದಾರೆ. ಅಡ್ವಾಣಿ ಅವರಿಗೆ 96 ವರ್ಷ. ಇಂತಹ ಪರಿಸ್ಥಿತಿಯಲ್ಲಿ ಅವರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
ಆರೆಸ್ಸೆಸ್ ಅಧಿಕಾರಿಗಳಾದ ಕೃಷ್ಣ ಗೋಪಾಲ್, ರಾಮ್ ಲಾಲ್ ಮತ್ತು ಅಲೋಕ್ ಕುಮಾರ್ ಅವರು ಲಾಲ್ ಕೃಷ್ಣ ಅಡ್ವಾಣಿ ಅವರ ಮನೆಗೆ ಆಗಮಿಸಿ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಅವರನ್ನು ಆಹ್ವಾನಿಸಿದ್ದರು. ಈ ಸಂದರ್ಭದಲ್ಲಿ ಅಡ್ವಾಣಿ ಅವರು ಇಂತಹ ಭವ್ಯ ಸಮಾರಂಭದಲ್ಲಿ ನೇರವಾಗಿ ಉಪಸ್ಥಿತರಿರುವ ಅವಕಾಶ ಸಿಕ್ಕಿದ್ದು ಅದೃಷ್ಟದ ಸಂಗತಿ ಎಂದು ಹೇಳಿದ್ದರು.
ದಿಲ್ಲಿ, ಉತ್ತರ ಪ್ರದೇಶದ ಭಾಗಗಳಲ್ಲಿ ವಿಪರೀತ ಚಳಿ ವಾತಾವರಣವಿರುವುದರಿಂದ ಆರೋಗ್ಯಕ್ಕೆ ತೊಂದರೆ ಉಂಟಾಗುವ ಸಾಧ್ಯತೆ ಇರುವುದರಿಂದ ಲಾಲ್ ಕೃಷ್ಣ ಅಡ್ವಾಣಿ ಅವರು ಸಮಾರಂಭದಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಕ್ರೈಂ ಥ್ರಿಲ್ಲರ್ “ಕಲುಷ” ಟೀಸರ್ ಬಿಡುಗಡೆ ಇದೇ ಮಾರ್ಚ್ 23
ಕಲುಷ ಕನ್ನಡ ಚಲನಚಿತ್ರ
ಪಿಜಿ ವಿಭಾಗದಲ್ಲಿ ಸಂಶೋಧನಾ ವಿಷಯಕ್ಕೆ ಸಂಬಂಧಿಸಿದ ವಿಶೇಷ ಉಪನ್ಯಾಸ ಕಾರ್ಯಕ್ರಮ
ಜಮಖಂಡಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂಭ್ರಮ
ಸ್ವಚ್ಛತೆಯೇ ಆರೋಗ್ಯಕ್ಕೆ ಅಡಿಪಾಯ: ಸುನಿಲ್ ರಾಟೋಡ್
ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಆಚರಿಸಲಾಯಿತು
ಶಿಕ್ಷಕನಿಗೆ ಬಹುಮುಖದ ವ್ಯಕ್ತಿತ್ವ ಇರಬೇಕು
ಪ್ರಶಿಕ್ಷಣಾರ್ಥಿಗಳ ಕಾರ್ಯಗಾರ ಕಾರ್ಯಕ್ರಮ