ಕೈಯೊಡ್ಡಿ ಪ್ರಸಾದವ ಕೊಂಡಡೆ ಕರ್ಮಧಾರಿ. ಶೇಷಪ್ರಸಾದವನಾಯ್ದು ಕೊಂಡಡೆ ವರ್ಮಹೀನ. ಉಕ್ಕುಳಪ್ರಸಾದವ ಕೊಂಡಡೆ ಸತ್ಕ್ರೀಗೆ ಸಲ್ಲ. ಇಂತಿವನರಿದು ಸಜ್ಜನಪ್ರಸಾದವ ನಿರ್ಧರದಿಂದ ಕೊಂಬ ಮಹಾಪ್ರಸಾದಿಯ ಕಾರುಣ್ಯವೆನಗೆಂದಿಗೆ ಸಾಧ್ಯವಪ್ಪುದು ? ಕುಂಭೇಶ್ವರಲಿಂಗದಲ್ಲಿ ಜಗನ್ನಾಥವವರಿದವಂಗಲ್ಲದೆ ಸಾಧ್ಯವಲ್ಲ
ಸುದ್ದಿ LOCAL NEWS

ದಾಸ ಶ್ರೇಷ್ಠ ಕನಕದಾಸ ಜಯಂತಿ ಆಚರಣೆ ಕಾರ್ಯಕ್ರಮ

by 24 on | 2025-11-09 10:44:14

Share: Facebook | Twitter | Whatsapp | Linkedin | Visits: 25


ದಾಸ ಶ್ರೇಷ್ಠ ಕನಕದಾಸ ಜಯಂತಿ ಆಚರಣೆ ಕಾರ್ಯಕ್ರಮ

ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯ

ವಿಜಯಪುರ : ನಗರದ ಬಿಎಲ್‌ಡಿಇ ಸಂಸ್ಥೆಯ ಎಸ್‌ಬಿ ಕಲಾ ಮತ್ತು ಕೆಸಿಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ದಿನಾಂಕ;೦೮-೧೧-೨೦೨೫ ಶನಿವಾರದಂದು ದಾಸ ಶ್ರೇಷ್ಠ ಕನಕದಾಸ  ಜಯಂತಿ ಆಚರಿಸಲಾಯಿತು.

ಈ ವೇಳೆಯಲ್ಲಿ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಉಷಾದೇವಿ ಹಿರೇಮಠ ಮಾತನಾಡಿ ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜದಲ್ಲಿನ ಅಂಕುಡೊಂಕುಗಳು ಸಮಾಜದಲ್ಲಿನ ಮೇಲು ಕೀಳು ಎಂಬುದು ತಮ್ಮ ಕಾವ್ಯದ ಮೂಲಕ ಪ್ರತಿಬಿಂಬಿಸಿದ್ದಾರೆ. ಅವರ ಇಡೀ ಸಾಹಿತ್ಯ ಅರುಳುವುದೇ ಕೀರ್ತನೆಗಳಲ್ಲಿ. ಕೀರ್ತನೆ ಅಂದ್ರೆ ಪರಮಾತ್ಮನ ಕೀರ್ತಿಯನ್ನ ಆರಾಧಿಸುವಂತಹ ಭಜನೆಗಳು. ತಮ್ಮ ಭಜನೆಗಳ ಮೂಲಕ ಲೋಕುದ್ದಾರೆ ಮಾಡಿದ್ದಾರೆ. ಒಬ್ಬ ಸಾಮಾಜಿಕ ದಾರ್ಶನಿಕರಾಗಿ ಸಾಹಿತ್ಯದಲ್ಲಿ ಒಬ್ಬ ಶ್ರೇಷ್ಠವಾಗಿ ದಾಸ ಶ್ರೇಷ್ಟರಾಗಿ ಹೊರಹೊಮ್ಮಿದ್ದಾರೆ ಹಾಗಾಗಿ ಅವರು ಹಾಕಿ ಕೊಟ್ಟ ಸನ್ಮಾರ್ಗಗಳತ್ತ ಸಾಗಬೇಕಾಗಿದೆ ಎಂದರು.

ಕನಕದಾಸ  ಜಯಂತಿ ಕೇವಲ ಜಯಂತಿಗೆ ಸೀಮಿತವಾಗದೆ ಅವರು ತಮ್ಮ ಕೀರ್ತನೆಗಳ ಮೂಲಕ ಕೊಟ್ಟ ಸಂದೇಶಗಳನ್ನು ನಮ್ಮ ಜೀವನದಲ್ಲಿ ಅವರ ವಿಚಾರಧರೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಕೊಳ್ಳುವುದರೊಂದಿಗೆ ಬದುಕನ್ನು ಸಾರ್ಥಕಪಡಿಸಿಕೊಳ್ಳಬೇಕಾಗಿದೆ ಎಂದು ಹೇಳಿದರು.


ಈ ಸಂದರ್ಭದಲ್ಲಿ ಪ್ರಾಚಾರ್ಯೆ ಡಾ.ಆರ್.ಎಂ.ಮಿರ್ಧೆ,ಉಪ ಪ್ರಾಚಾರ್ಯ ಡಾ.ಅನಿಲ ಭೀ.ನಾಯಕ, ಐಕ್ಯೂಎಸಿ ನಿರ್ದೇಶಕ ಡಾ.ಪಿ.ಎಸ್.ಪಾಟೀಲ,ಪ್ರೊ.ಪವನ್ ಮಹೇಂದ್ರಕರ್ ಸೇರಿದಂತೆ ಇನ್ನಿತರ ಪಿಯುಸಿ,ಪದವಿ ಮಹಾವಿದ್ಯಾಲಯದ ಬೋಧಕ ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Search
Popular News
Most Popular
ಬಿ.ಎಲ್.ಡಿ.ಇ ಸಂಸ್ಥೆ ಮತ್ತು ಅಲೆನ್ ಕರಿಯರ್ ಅಕಾಡೆಮಿ ಮಧ್ಯೆ ಶೈಕ್ಷಣಿಕ ಓರಿಯಂಟೇಶನ್ ಕಾರ್ಯಕ್ರಮದ ಕ್ಷಣಗಳು.
Vachana Pitamaha P. G. Halakatti College of Engineering
Nursing College Jamkhandi
BLDEA Nursing College Vijayapura
Vachana Pitamaha P. G. Halakatti College of Engineering Vijayapura
ಡಾ ಫ ಗು ಹಳಕಟ್ಟಿ, ಬಂಥನಾಳ ಶಿವಯೋಗಿಗಳು, ಡಾ ಬಿ ಎಂ ಪಾಟೀಲ್ ಹಾಗೂ ಬಂಗಾರಮ್ಮ ಸಜ್ಜನ ಅವರ ಸ್ಮರಣೆ ಕಾರ್ಯಕ್ರಮ

Leave a Comment