ಕೈಯೊಡ್ಡಿ ಪ್ರಸಾದವ ಕೊಂಡಡೆ ಕರ್ಮಧಾರಿ. ಶೇಷಪ್ರಸಾದವನಾಯ್ದು ಕೊಂಡಡೆ ವರ್ಮಹೀನ. ಉಕ್ಕುಳಪ್ರಸಾದವ ಕೊಂಡಡೆ ಸತ್ಕ್ರೀಗೆ ಸಲ್ಲ. ಇಂತಿವನರಿದು ಸಜ್ಜನಪ್ರಸಾದವ ನಿರ್ಧರದಿಂದ ಕೊಂಬ ಮಹಾಪ್ರಸಾದಿಯ ಕಾರುಣ್ಯವೆನಗೆಂದಿಗೆ ಸಾಧ್ಯವಪ್ಪುದು ? ಕುಂಭೇಶ್ವರಲಿಂಗದಲ್ಲಿ ಜಗನ್ನಾಥವವರಿದವಂಗಲ್ಲದೆ ಸಾಧ್ಯವಲ್ಲ
ಸುದ್ದಿ LOCAL NEWS

ಬಿಎಲ್ಡಿಇ ಸಂಸ್ಥೆಯ ಶ್ರೀ ಬಿ.ಎಂ. ಪಾಟೀಲ ನರ್ಸಿಂಗ್ ಮಹಾವಿದ್ಯಾಲಯದಲ್ಲಿ ಆಗಜ್ ಸ್ವಾಗತ ಸಮಾರಂಭ

by 26 on | 2026-01-01 14:35:03

Share: Facebook | Twitter | Whatsapp | Linkedin | Visits: 246


ಬಿಎಲ್ಡಿಇ ಸಂಸ್ಥೆಯ ಶ್ರೀ ಬಿ.ಎಂ. ಪಾಟೀಲ ನರ್ಸಿಂಗ್ ಮಹಾವಿದ್ಯಾಲಯದಲ್ಲಿ ಆಗಜ್ ಸ್ವಾಗತ ಸಮಾರಂಭ

ಬಿಎಲ್ಡಿಇಯ ಶ್ರೀ ಬಿ.ಎಂ. ಪಾಟೀಲ ನರ್ಸಿಂಗ್ ಮಹಾವಿದ್ಯಾಲಯದಲ್ಲಿ ಹೊಸದಾಗಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಆಗಜ್ ಎಂಬ ಸ್ವಾಗತ ಕಾರ್ಯಕ್ರಮವನ್ನು ಭವ್ಯವಾಗಿ ಆಯೋಜಿಸಲಾಯಿತು. ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಮನಗೂಳಿಯ ಶ್ರೀ ಸ್ವಾಮಿ ವಿವೇಕಾನಂದ ಆಶ್ರಮದ ಪರಮ ಪೂಜ್ಯ ಶಿವಪ್ರಿಯಾನಂದ ಸ್ವಾಮೀಜಿಯವರು ಆಗಮಿಸಿ ದಿವ್ಯ ಸಾನ್ನಿಧ್ಯ ವಹಿಸಿದರು.ಕಾರ್ಯಕ್ರಮವನ್ನು ಉದ್ಧೇಶಿಸಿ ಮಾತನಾಡಿದ ಪೂಜ್ಯರು, ವಿದ್ಯಾರ್ಥಿಗಳಲ್ಲಿ ಏಕಾಗ್ರತೆ, ಕಾರ್ಯಸಾಧನೆ ಮತ್ತು ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಸಮಾಜದ ಬದಲಾವಣೆಗಳ ಕುರಿತು ಸ್ಪಷ್ಟವಾಗಿ ಸಂದೇಶ ನೀಡಿದರು. ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಬದಲಾವಣೆಗಳು ಯಶಸ್ಸು ಪ್ರಾಪ್ತಿಗೆ ಹೇಗೆ ಸಹಕಾರಿ ಎಂಬುದನ್ನು ವಿವರಿಸುವ ಜೊತೆಗೆ, ಸ್ವಾಮಿ ವಿವೇಕಾನಂದರ ಆದರ್ಶಗಳು ಹಾಗೂ ಸಂದೇಶಗಳನ್ನು ವಿದ್ಯಾರ್ಥಿಗಳ ಹೃದಯವನ್ನು ಮುಟ್ಟುವ ರೀತಿಯಲ್ಲಿ ಅಭಿವ್ಯಕ್ತಿಸಿದರು. ಯುವಕರು ಮನಸ್ಸು ಮಾಡಿದರೆ ದೇಶದ ಚಿತ್ರಣವನ್ನೇ ಬದಲಾಯಿಸುವ ಸಾಮರ್ಥ್ಯ ಹೊಂದಿದ್ದಾರೆಎಂದು ಹೇಳಿದ ಪೂಜ್ಯರು, ವಿದ್ಯಾರ್ಥಿಗಳು ತಮ್ಮ ಕಾಲೇಜು, ಶಿಕ್ಷಕರು, ತಂದೆತಾಯಿ ಮತ್ತು ಸಮಾಜದ ಹೆಸರನ್ನು ಕಂಗೊಳಿಸುವಂತೆ ನಿಸ್ವಾರ್ಥ ಸೇವೆ ಮತ್ತು ಪರಿಶ್ರಮದಿಂದ ಮುಂದುವರಿಯಬೇಕೆಂದು ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದ ಕೊನೆಯಲ್ಲಿ ಸ್ವಾಮೀಜಿಗಳು ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಕೇಳಿದ ಹಲವಾರು ಪ್ರಶ್ನೆಗಳಿಗೆ ಉತ್ತರಿಸುತ್ತಾ ಚರ್ಚಾ ಗೋಷ್ಠಿಯಲ್ಲಿ ಭಾಗವಹಿಸಿ ಅಮೂಲ್ಯ ಸಲಹೆಗಳನ್ನು ನೀಡಿದರು. ಹೊಸ ವಿದ್ಯಾರ್ಥಿಗಳು ಅವರ ಉಪದೇಶಗಳಿಂದ ಪ್ರೇರಿತರಾಗಿ ತಮ್ಮ ಭವಿಷ್ಯವನ್ನು ಜವಾಬ್ದಾರಿಯಿಂದ ರೂಪಿಸಿಕೊಳ್ಳುವುದಾಗಿ ತಿಳಿಸಿದರು.ಕಾರ್ಯಕ್ರಮಕ್ಕೆ ಅಧ್ಯಕ್ಷತೆ ವಹಿಸಿದ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಶಲೋಮನ್ ಚೊಪಡೆ ಮಾತನಾಡಿ, ಸಂಸ್ಥೆಯಲ್ಲಿ ಪಡೆಯುವ ಶಿಕ್ಷಣ ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣದ ಬಲವಾದ ಆಧಾರವಾಗಬೇಕು ಮಾತ್ರವಲ್ಲ, ಉತ್ತಮ ಸಮಾಜ ನಿರ್ಮಾಣಕ್ಕೂ ಸಹಾಯಕವಾಗಬೇಕು ಎಂದು ಹಿತವಚನ ನೀಡಿದರು. ಸಂದರ್ಭದಲ್ಲಿ ಉಪಪ್ರಾಚಾರ್ಯರು ಡಾ. ಸುಚಿತ್ರ ರಾಟಿ, ಮೊದಲ ವರ್ಷದ ಉಪನ್ಯಾಸಕರು, ಕಾಲೇಜಿನ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಕಾರ್ಯಕ್ರಮವನ್ನು ಶ್ರೀಮತಿ ಭಾಗ್ಯಶ್ರೀ ಬಾಗೇವಾಡಿ ನಿರೂಪಿಸಿದರು.ಶ್ರೀ ಸುಧೀರ್ ಬಾಲಿ ಸ್ವಾಗತಿಸಿದರು.
ಡಾ. ಸತೀಶ್ ನಡಗಡ್ಡಿ ವಂದನೆ ಸಲ್ಲಿಸಿದರು.

Search
Popular News
Most Popular
ಬಿ.ಎಲ್.ಡಿ.ಇ ಸಂಸ್ಥೆ ಮತ್ತು ಅಲೆನ್ ಕರಿಯರ್ ಅಕಾಡೆಮಿ ಮಧ್ಯೆ ಶೈಕ್ಷಣಿಕ ಓರಿಯಂಟೇಶನ್ ಕಾರ್ಯಕ್ರಮದ ಕ್ಷಣಗಳು.
Vachana Pitamaha P. G. Halakatti College of Engineering
Nursing College Jamkhandi
BLDEA Nursing College Vijayapura
Vachana Pitamaha P. G. Halakatti College of Engineering Vijayapura
ಡಾ ಫ ಗು ಹಳಕಟ್ಟಿ, ಬಂಥನಾಳ ಶಿವಯೋಗಿಗಳು, ಡಾ ಬಿ ಎಂ ಪಾಟೀಲ್ ಹಾಗೂ ಬಂಗಾರಮ್ಮ ಸಜ್ಜನ ಅವರ ಸ್ಮರಣೆ ಕಾರ್ಯಕ್ರಮ

Leave a Comment