ಕೈಯೊಡ್ಡಿ ಪ್ರಸಾದವ ಕೊಂಡಡೆ ಕರ್ಮಧಾರಿ. ಶೇಷಪ್ರಸಾದವನಾಯ್ದು ಕೊಂಡಡೆ ವರ್ಮಹೀನ. ಉಕ್ಕುಳಪ್ರಸಾದವ ಕೊಂಡಡೆ ಸತ್ಕ್ರೀಗೆ ಸಲ್ಲ. ಇಂತಿವನರಿದು ಸಜ್ಜನಪ್ರಸಾದವ ನಿರ್ಧರದಿಂದ ಕೊಂಬ ಮಹಾಪ್ರಸಾದಿಯ ಕಾರುಣ್ಯವೆನಗೆಂದಿಗೆ ಸಾಧ್ಯವಪ್ಪುದು ? ಕುಂಭೇಶ್ವರಲಿಂಗದಲ್ಲಿ ಜಗನ್ನಾಥವವರಿದವಂಗಲ್ಲದೆ ಸಾಧ್ಯವಲ್ಲ
ಜಿಲ್ಲೆ ವಿಜಯಪುರ

ಮೇ 9 ರಿಂದ ಆಲಮಟ್ಟಿ ಜಲಾಶದಿಂದ ಕಾಲುವೆಗಳ ಮೂಲಕ ಕೆರೆಗಳಿಗೆ ನೀರು ಹರಿಯಲಿದೆ- ಸಚಿವ ಎಂ.ಬಿ.ಪಾಟೀಲ

by 1 on | 2024-05-09 14:34:11

Share: Facebook | Twitter | Whatsapp | Linkedin | Visits: 244


ಮೇ  9 ರಿಂದ ಆಲಮಟ್ಟಿ ಜಲಾಶದಿಂದ  ಕಾಲುವೆಗಳ ಮೂಲಕ ಕೆರೆಗಳಿಗೆ ನೀರು ಹರಿಯಲಿದೆ- ಸಚಿವ ಎಂ.ಬಿ.ಪಾಟೀಲ

ಬೀರು ಬೇಸಿಗೆಯಲ್ಲಿ ತತ್ತರಿಸಿದ ಜನ-ಜಾನುವಾರುಗಳಿಗೆ ಕುಡಿಯುವ ನೀರು ಪೂರೈಸಲು ಆಲಮಟ್ಟಿ ಜಲಾಶದಿಂದ ಮುಳವಾಡ ಏತನೀರಾವರಿ ಹಾಗೂ ಚಿಮ್ಮಲಗಿ ಏತನೀರಾವರಿ ಯೋಜನೆಯಡಿ ಇಂದಿನಿಂದ ಕಾಲುವೆಗಳ ಮೂಲಕ ಕೆರೆಗಳಿಗೆ ನೀರು ಹರಿಸಲಾಗುವುದು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.


ಈ ಕುರಿತು ಪ್ರಕಟಣೆ ನೀಡಿರುವ ಅವರು, ವಿಜಯಪುರ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿರುವದನ್ನು ತಪ್ಪಿಸಲು ಈ ಹಿಂದೆ ತಿಡಗುಂದಿ ಕಾಲುವೆಯಿಂದ ನೀರು ಹರಿಸಿ, ಭೂತನಾಳ ಕೆರೆ ತುಂಬಿಸಿ, ನಗರದಲ್ಲಿ ಸಮಪರ್ಕವಾಗಿ ಕುಡಿಯುವ ನೀರು ಪೂರೈಸಲಾಗಿತ್ತು. ಈಗ ಮತ್ತೆ ಭೂತನಾಳ ಕೆರೆಗೆ ಹಾಗೂ ಇಂಡಿ ತಾಲೂಕಿನ ಹೊರ್ತಿ ಮತ್ತು ಇತರೆ 31 ಬಹುಹಳ್ಳಿ ಕುಡಿಯುವ ನೀರು ಸರಬರಾಜು ಯೋಜನೆಯಡಿ ತಿಡಗುಂದಿ ಕಾಲುವೆ ಮೂಲಕ ನೀರು ಹರಿಸಲಾಗುವುದು.


ಬಸವನಬಾಗೇವಾಡಿ ತಾಲೂಕಿನ ಅರೇಶಂಕರ ಮತ್ತು ಇತರೆ 19 ಗ್ರಾಮಗಳ ಕಣಕಾಲ ಮತ್ತು 11 ಗ್ರಾಮಗಳ ಬಹುಹಳ್ಳಿ ಕುಡಿಯುವ ನೀರು ಸರಬರಾಜು ಯೋಜನೆಯು 0.45ಟಿ.ಎಂ.ಸಿ ನೀರನ್ನು ಮುಳವಾಡ ಏತನೀರಾವರಿ ಹಾಗೂ ಚಿಮ್ಮಲಗಿ ಏತನೀರಾವರಿ ಯೋಜನೆಯಡಿ ಕೆರೆಗಳಿಗೆ ಹರುಸುವಂತೆ ಕೋರಲಾಗಿತ್ತು. ಇದಕ್ಕೆ ಸ್ಪಂಧಿಸಿದ ಬೆಳಗಾವಿ ಪ್ರಾದೇಶಿಕ ಆಯುಕ್ತರು ಮೇ 28 ರವರೆಗೆ 2 ಟಿ.ಎಂ.ಸಿ ನೀರು ಕೆರೆಗಳಿಗೆ ಹರಿಯಲಿದೆ ಎಂದರು.


ಭೀಕರ ಬರ ಹಾಗೂ ಬೇಸಿಗೆ ಇರುವದರಿಂದ ಕುಡಿಯುವ ನೀರು ಒದಗಿಸಲು ಕಾಲುವೆಗಳಿಗೆ ನೀರು ಹರಿಸುವಂತೆ ಒಂದು ತಿಂಗಳಿನಿಂದ ನಿರಂತರವಾಗಿ ಜಿಲ್ಲಾಧಿಕಾರಿಗಳ ಮೂಲಕ ಕೋರಿದ್ದೆ. ನೀತಿಸಂಹಿತೆ ಕಾರಣ ಚುನಾವಣೆ ಆಯೋಗದ ಅನುಮತಿ ಪಡೆದು, ಕಾಲುವೆ ಮೂಲಕ ನೀರು ಹರಿಸಲು ಇದೀಗ ಆದೇಶ ನೀಡಿದ್ದಾರೆ ಎಂದು ಪ್ರಕಟಣೆಯಲ್ಲಿ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.

Search
Popular News
Most Popular
ಬಿ.ಎಲ್.ಡಿ.ಇ ಸಂಸ್ಥೆ ಮತ್ತು ಅಲೆನ್ ಕರಿಯರ್ ಅಕಾಡೆಮಿ ಮಧ್ಯೆ ಶೈಕ್ಷಣಿಕ ಓರಿಯಂಟೇಶನ್ ಕಾರ್ಯಕ್ರಮದ ಕ್ಷಣಗಳು.
Vachana Pitamaha P. G. Halakatti College of Engineering
Nursing College Jamkhandi
BLDEA Nursing College Vijayapura
Vachana Pitamaha P. G. Halakatti College of Engineering Vijayapura
ಡಾ ಫ ಗು ಹಳಕಟ್ಟಿ, ಬಂಥನಾಳ ಶಿವಯೋಗಿಗಳು, ಡಾ ಬಿ ಎಂ ಪಾಟೀಲ್ ಹಾಗೂ ಬಂಗಾರಮ್ಮ ಸಜ್ಜನ ಅವರ ಸ್ಮರಣೆ ಕಾರ್ಯಕ್ರಮ

Leave a Comment