ಕೈಯೊಡ್ಡಿ ಪ್ರಸಾದವ ಕೊಂಡಡೆ ಕರ್ಮಧಾರಿ. ಶೇಷಪ್ರಸಾದವನಾಯ್ದು ಕೊಂಡಡೆ ವರ್ಮಹೀನ. ಉಕ್ಕುಳಪ್ರಸಾದವ ಕೊಂಡಡೆ ಸತ್ಕ್ರೀಗೆ ಸಲ್ಲ. ಇಂತಿವನರಿದು ಸಜ್ಜನಪ್ರಸಾದವ ನಿರ್ಧರದಿಂದ ಕೊಂಬ ಮಹಾಪ್ರಸಾದಿಯ ಕಾರುಣ್ಯವೆನಗೆಂದಿಗೆ ಸಾಧ್ಯವಪ್ಪುದು ? ಕುಂಭೇಶ್ವರಲಿಂಗದಲ್ಲಿ ಜಗನ್ನಾಥವವರಿದವಂಗಲ್ಲದೆ ಸಾಧ್ಯವಲ್ಲ
ದೇಶ ACHIEVEMENT

ಮೂರು ಹೊಸ ಅಪರಾಧ ಕಾನೂನುಗಳು ಇಂದಿನಿಂದ ಜಾರಿ.

by 1 on | 2024-07-01 17:46:22 Last Updated by admin on2026-04-18 19:17:31

Share: Facebook | Twitter | Whatsapp | Linkedin | Visits: 256


ಮೂರು ಹೊಸ ಅಪರಾಧ ಕಾನೂನುಗಳು ಇಂದಿನಿಂದ ಜಾರಿ.

ಮೂರು ಹೊಸ ಅಪರಾಧ ಕಾನೂನುಗಳು

 ಭಾರತೀಯ ನ್ಯಾಯ ಸಂಹಿತೆ-2023 (ಬಿಎನ್‌ಎಸ್) ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 (ಬಿಎನ್‌ಎಸ್‌ಎಸ್) ಹಾಗೂ ಭಾರತೀಯ ಸಾಕ್ಷ್ಯ ಅಧಿನಿಯಮ-2023 (ಬಿಎಸ್ಎ) ಕಾನೂನುಗಳು ದೇಶಾದ್ಯಂತ ಜುಲೈ 1 ಸೋಮವಾರ ದಿಂದ ಜಾರಿಗೆ ಬರಲಿವೆ.


ಈ ಮೂರೂ ಹೊಸ ಕಾನೂನುಗಳು 2023ರ ಡಿಸೆಂಬರ್‌ನಲ್ಲೇ ಸಂಸತ್ತಿನ ಅನುಮೋದನೆ ಪಡೆದು, ರಾಷ್ಟ್ರಪತಿಗಳ ಅಂಕಿತವನ್ನೂ ಪಡೆದುಕೊಂಡಿವೆ.


ಈ ಕಾಯ್ದೆಗಳನ್ನು ಈವರೆಗೂ ಬಳಕೆಯಲ್ಲಿದ್ದ ಭಾರತೀಯ ದಂಡ ಸಂಹಿತೆ-1860(ಐಪಿಸಿ), ಅಪರಾಧ ಪ್ರಕ್ರಿಯಾ ಸಂಹಿತೆ-1973 (ಸಿಆರ್ ಪಿಸಿ) ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ-1872(ಐಇಎ) ಕಾಯ್ದೆಗಳಿಗೆ ಬದಲಿಯಾಗಿ ಜಾರಿಗೆ ತರಲಾಗುತ್ತಿದೆ.


ಹೊಸ ಕಾಯ್ದೆಗಳ ಬಗ್ಗೆ ಜನರಲ್ಲಿ ಹೆಚ್ಚಿನ ಅರಿವು ಮೂಡಿಸುವ ಸಲುವಾಗಿ ಕಳೆದ ಎರಡು ತಿಂಗಳಿಂದ ಕೇಂದ್ರ ಸರಕಾರದಿಂದ ಪ್ರಯತ್ನಗಳು ನಡೆದಿವೆ.


ದೆಹಲಿ, ಕೋಲ್ಕತ್ತ, ಗುವಾಹಟಿ ಮತ್ತು ಬೆಂಗಳೂರು ಸೇರಿದಂತೆ ದೇಶದ ವಿವಿಧೆಡೆಯಲ್ಲಿ ಸಂಬಂಧಿಸಿದ ಇಲಾಖೆಗಳು, ನ್ಯಾಯಾಂಗ ಇಲಾಖೆಯವರು, ಕಾಯ್ದೆಜಾರಿ ಸಂಸ್ಥೆಗಳು, ಸರಕಾರಿ ವಕೀಲರು, ಜಿಲ್ಲಾಡಳಿತದ ಅಧಿಕಾರಿಗಳು, ಶಿಕ್ಷಣ ಕ್ಷೇತ್ರದ ತಜ್ಞರು, ಕಾನೂನು ವಿದ್ಯಾರ್ಥಿಗಳನ್ನು ಒಳಗೊಂಡಂತೆ ಕೇಂದ್ರದ ಕಾನೂನು ವ್ಯವಹಾರಗಳ ಇಲಾಖೆ ಕಾರ್ಯಾಗಾರಗಳನ್ನೂ ನಡೆಸಿದೆ.


ನಡೆದಿರುವ ಅಪರಾಧದ ಬಗ್ಗೆ ಯಾವುದೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವುದು, ಆನ್‌ಲೈನ್‌ ಮೂಲಕ ದೂರು ಸಲ್ಲಿಸಬಹುದು ಎಂದು ತಿಳಿಸಿದೆ.



Search
Popular News
Most Popular
ಬಿ.ಎಲ್.ಡಿ.ಇ ಸಂಸ್ಥೆ ಮತ್ತು ಅಲೆನ್ ಕರಿಯರ್ ಅಕಾಡೆಮಿ ಮಧ್ಯೆ ಶೈಕ್ಷಣಿಕ ಓರಿಯಂಟೇಶನ್ ಕಾರ್ಯಕ್ರಮದ ಕ್ಷಣಗಳು.
Vachana Pitamaha P. G. Halakatti College of Engineering
Nursing College Jamkhandi
BLDEA Nursing College Vijayapura
Vachana Pitamaha P. G. Halakatti College of Engineering Vijayapura
ಡಾ ಫ ಗು ಹಳಕಟ್ಟಿ, ಬಂಥನಾಳ ಶಿವಯೋಗಿಗಳು, ಡಾ ಬಿ ಎಂ ಪಾಟೀಲ್ ಹಾಗೂ ಬಂಗಾರಮ್ಮ ಸಜ್ಜನ ಅವರ ಸ್ಮರಣೆ ಕಾರ್ಯಕ್ರಮ

Leave a Comment