ಕೈಯೊಡ್ಡಿ ಪ್ರಸಾದವ ಕೊಂಡಡೆ ಕರ್ಮಧಾರಿ. ಶೇಷಪ್ರಸಾದವನಾಯ್ದು ಕೊಂಡಡೆ ವರ್ಮಹೀನ. ಉಕ್ಕುಳಪ್ರಸಾದವ ಕೊಂಡಡೆ ಸತ್ಕ್ರೀಗೆ ಸಲ್ಲ. ಇಂತಿವನರಿದು ಸಜ್ಜನಪ್ರಸಾದವ ನಿರ್ಧರದಿಂದ ಕೊಂಬ ಮಹಾಪ್ರಸಾದಿಯ ಕಾರುಣ್ಯವೆನಗೆಂದಿಗೆ ಸಾಧ್ಯವಪ್ಪುದು ? ಕುಂಭೇಶ್ವರಲಿಂಗದಲ್ಲಿ ಜಗನ್ನಾಥವವರಿದವಂಗಲ್ಲದೆ ಸಾಧ್ಯವಲ್ಲ
ಮನರಂಜನೆ MANGALORE

ಮಂಗಳೂರಿನಿಂದ ಹೊರಟ ಸರಕು ಹಡಗಿನ ಮೇಲೆ ಕ್ಷಿಪಣಿ ದಾಳಿ – ಬಾರಿ ಅನಾಹುತದಿಂದ ಪಾರು

by 1 on | 2023-12-15 08:58:58

Share: Facebook | Twitter | Whatsapp | Linkedin | Visits: 347


ಮಂಗಳೂರಿನಿಂದ ಹೊರಟ ಸರಕು ಹಡಗಿನ ಮೇಲೆ ಕ್ಷಿಪಣಿ ದಾಳಿ – ಬಾರಿ ಅನಾಹುತದಿಂದ ಪಾರು

ಬಂದರು ನಗರಿ ಮಂಗಳೂರಿನಿಂದ ಶೆಲ್‌ ಕಂಪೆನಿಯ ವೈಮಾನಿಕ ಇಂಧನವನ್ನು ಹೊತ್ತು ನೆದರ್ಲೆಂಡ್‌ಗೆ ತೆರಳುತ್ತಿದ್ದ ಸರಕು ಹಡಗಿನ ಮೇಲೆ ಯೆಮೆನ್‌ ಸಮೀಪ ಕಡಲ್ಗಳ್ಳರು ಕ್ಷಿಪಣಿ ದಾಳಿ ನಡೆಸಿದ್ದಾರೆ.


ಅದೃಷ್ಟವಶಾತ್‌ ಕಡಲ್ಗಳ್ಳರ ಗುರಿ ತಪ್ಪಿದ ಪರಿಣಾಮ ಹಡಗಿಗೆ ಯಾವುದೇ ಅಪಾಯವಾಗಿಲ್ಲ. ಹಡಗು-ಸಿಬಂದಿ ಸುರಕ್ಷಿತವಾಗಿದ್ದಾರೆ ಎಂದು ಮೂಲ ಗಳು ತಿಳಿಸಿವೆ. ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಉತ್ಪಾದನೆಯಾದ ವೈಮಾನಿಕ ಇಂಧನವನ್ನು ಶೆಲ್‌ ಕಂಪೆನಿಯು ಖರೀದಿಸಿ ನೆದರ್ಲೆಂಡ್‌ಗೆ ಸಾಗಾಟ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಹಡಗಿಗೆ ಡಿ. 6ರಂದು ಮಂಗಳೂರಿನಲ್ಲಿ ತೈಲ ಸಂಗ್ರಹ ಮಾಡಲಾಗಿತ್ತು.


11ರಂದು ರಾತ್ರಿ ಯೆಮೆನ್‌ನ ಬಂಡುಕೋರರ ಆಡಳಿತವಿರುವ ಬಾಬ್‌ ಎಲ್‌-ಮಂಡೆಬ್‌ ಕೊಲ್ಲಿಯಲ್ಲಿ ಕ್ಷಿಪಣಿ ದಾಳಿ ನಡೆದಿದೆ.


ಎಂಆರ್‌ಪಿಎಲ್‌ನಿಂದ ಶೆಲ್‌ ಸಹಿತ ವಿವಿಧ ಕಂಪೆನಿಯವರು ತೈಲ ಖರೀದಿ ಮಾಡಿ ಸಂಬಂಧಪಟ್ಟ ಕಂಪೆನಿಯವರ ಹಡಗಿನಲ್ಲಿ ಸಾಗಾಟ ಮಾಡುತ್ತಾರೆ. ಅವರು ದೇಶ-ವಿದೇಶಗಳಿಗೆ ಮಾರುಕಟ್ಟೆ ಆಧಾರಿತವಾಗಿ ಸಾಗಾಟ ಮಾಡುತ್ತಾರೆ ಎಂದು ಎಂಆರ್‌ಪಿಎಲ್‌ ಮೂಲಗಳು ತಿಳಿಸಿವೆ.

Search
Popular News
Most Popular
ಬಿ.ಎಲ್.ಡಿ.ಇ ಸಂಸ್ಥೆ ಮತ್ತು ಅಲೆನ್ ಕರಿಯರ್ ಅಕಾಡೆಮಿ ಮಧ್ಯೆ ಶೈಕ್ಷಣಿಕ ಓರಿಯಂಟೇಶನ್ ಕಾರ್ಯಕ್ರಮದ ಕ್ಷಣಗಳು.
Vachana Pitamaha P. G. Halakatti College of Engineering
Nursing College Jamkhandi
BLDEA Nursing College Vijayapura
Vachana Pitamaha P. G. Halakatti College of Engineering Vijayapura
ಡಾ ಫ ಗು ಹಳಕಟ್ಟಿ, ಬಂಥನಾಳ ಶಿವಯೋಗಿಗಳು, ಡಾ ಬಿ ಎಂ ಪಾಟೀಲ್ ಹಾಗೂ ಬಂಗಾರಮ್ಮ ಸಜ್ಜನ ಅವರ ಸ್ಮರಣೆ ಕಾರ್ಯಕ್ರಮ

Leave a Comment