ಕೈಯೊಡ್ಡಿ ಪ್ರಸಾದವ ಕೊಂಡಡೆ ಕರ್ಮಧಾರಿ. ಶೇಷಪ್ರಸಾದವನಾಯ್ದು ಕೊಂಡಡೆ ವರ್ಮಹೀನ. ಉಕ್ಕುಳಪ್ರಸಾದವ ಕೊಂಡಡೆ ಸತ್ಕ್ರೀಗೆ ಸಲ್ಲ. ಇಂತಿವನರಿದು ಸಜ್ಜನಪ್ರಸಾದವ ನಿರ್ಧರದಿಂದ ಕೊಂಬ ಮಹಾಪ್ರಸಾದಿಯ ಕಾರುಣ್ಯವೆನಗೆಂದಿಗೆ ಸಾಧ್ಯವಪ್ಪುದು ? ಕುಂಭೇಶ್ವರಲಿಂಗದಲ್ಲಿ ಜಗನ್ನಾಥವವರಿದವಂಗಲ್ಲದೆ ಸಾಧ್ಯವಲ್ಲ
ಸಾಧನೆ TECHONOLGY

ಬಿ.ಎಲ್.ಡಿ.ಇ ವಿವಿ ಚಿಕ್ಕಮಕ್ಕಳ ತಜ್ಞ ಡಾ.ಎಂ.ಎಂ.ಪಾಟೀಲರು ರಚಿಸಿದ ಲೇಖನ ವಿದೇಶದಲ್ಲಿ ಪ್ರಕಟ.

by 7 on | 2024-08-28 12:56:42

Share: Facebook | Twitter | Whatsapp | Linkedin | Visits: 317


ಬಿ.ಎಲ್.ಡಿ.ಇ ವಿವಿ ಚಿಕ್ಕಮಕ್ಕಳ ತಜ್ಞ ಡಾ.ಎಂ.ಎಂ.ಪಾಟೀಲರು ರಚಿಸಿದ ಲೇಖನ ವಿದೇಶದಲ್ಲಿ ಪ್ರಕಟ.


ನಗರದ ಬಿ. ಎಲ್. ಡಿ. ಇ ಡೀಮ್ಡ್ ವಿಶ್ವವಿದ್ಯಾನಿಲಯದ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಚಿಕ್ಕಮಕ್ಕಳ ತಜ್ಞ ಡಾ. ಎಂ. ಎಂ. ಪಾಟೀಲ ಮತ್ತು ಅವರ ತಂಡ ಬರೆದ ರಸಾಯನಿಕ ಸಿಂಪಡಿಸಿದ ದ್ರಾಕ್ಷಿ ಸೇವನೆಯಿಂದ ಉಂಟಾಗುವ ವಿಷಪ್ರಭಾವ ಎಂಬ ಮಹತ್ವದ ಲೇಖನ ವಿಶ್ವದ ಮಟ್ಟದಲ್ಲಿ ಪ್ರಸಿದ್ಧವಾದ ಮೆಡಿಕಲ್ ಜರ್ನಲ್ ಗ್ಲೋಬಲ್ ಹೆಲ್ತ್ ಕೇಸ್ ರಿಪೋರ್ಟ್ ನಲ್ಲಿ ಪ್ರಕಟವಾಗಿದೆ.  


ಈ ಲೇಖನವು ಗ್ರಾಮೀಣ ಪ್ರದೇಶಗಳಲ್ಲಿ ಕಂಡುಬರುವ ಒಂದು ಮುಖ್ಯ ಸಮಸ್ಯೆಯನ್ನು ಅತ್ಯಂತ ಪರಿಣಾಮಕಾರಿಯಾಗಿ ಬೆಳಕಿಗೆ ತಂದಿದೆ.  ದ್ರಾಕ್ಷಿಯನ್ನು ತಿನ್ನುವ ಮುನ್ನ ಅದನ್ನು ಸ್ವಚ್ಛಗೊಳಿಸದೆ ಇರುವುದರಿಂದ ಉಂಟಾಗುವ ಸಮಸ್ಯೆಗಳು ವಿಶೇಷವಾಗಿ ರಾಸಾಯನಿಕ ಕೀಟನಾಶಕಗಳಿಂದ ಎದುರಾಗುವ ಅಪಾಯಗಳ ಕುರಿತು ಈ ಲೇಖನ ಸಂಪೂರ್ಣ ಮಾಹಿತಿ ಹೊಂದಿದೆ.  ಗ್ರಾಮೀಣ ಭಾಗದ ಮಕ್ಕಳು ಎದುರಿಸುವ ಹಾನಿಕಾರ ಸಮಸ್ಯೆಗಳಿಗೆ ಒಳಗಾಗುವುದನ್ನು ಹೇಗೆ ತಪ್ಪಿಸಬಹುದು ಎಂಬುದರ ಕುರಿತು ಕೂಡ ಈ ಲೇಖನದಲ್ಲಿ ಮಾಹಿತಿ ನೀಡಲಾಗಿದೆ.  


ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಶಿಕ್ಷಣದ ಕೊರತೆ ಎಷ್ಟು ಗಂಭೀರವಾಗಿದೆ ಎಂಬುದನ್ನು ಈ ಲೇಖನದಲ್ಲಿ ಎತ್ತಿ ತೋರಿಸಲಾಗಿದ್ದು, ಮಕ್ಕಳಲ್ಲಿ ಈ ರೀತಿಯ ರೋಗ ಲಕ್ಷಣಗಳನ್ನು ಗುರುತಿಸುವುದು ಮತ್ತು ತ್ವರಿತ ಚಿಕಿತ್ಸೆ ನೀಡುವುದು ಎಷ್ಟು ಮುಖ್ಯ ಎಂಬುದರ ಮೇಲೂ ಈ ಲೇಖನ ಬೆಳಕು ಚೆಲ್ಲಿದೆ.  ಅಲ್ಲದೇ, ತೊಳೆಯದೆ ಇರುವ ದ್ರಾಕ್ಷಿ ಹಣ್ಣುಗಳ ಸೇವನೆಯ ಅಭ್ಯಾಸದಿಂದ ಮಕ್ಕಳ ಮೇಲೆ ಉಂಟಾಗುವ ಆರೋಗ್ಯ ಹಾನಿಯ ಬಗ್ಗೆ ಮಹತ್ವದ ಎಚ್ಚರಿಕೆಯನ್ನು ಮೂಡಿಸಲಾಗಿದೆ.  


ಡಾ. ಎಂ. ಎಂ. ಪಾಟೀಲ ಅವರ ತಂಡದಲ್ಲಿ ಸಂಶೋಧನೆ ಕೇಂದ್ರದ ಉಪನಿರ್ದೇಶಕಿ ಡಾ. ಚಂದ್ರಿಕಾ ದೊಡ್ಡಿಹಾಳ, ಡಾ. ಅನ್ವಿತಾ ಸಿನ್ಹಾ ಹಾಗೂ ಡಾ. ಪ್ರಸನ್ನ ಕುಮಾರ ಬಿ.ಎಂ ಸಹ-ಲೇಖಕರಾಗಿದ್ದಾರೆ.


ಅಂತಾರಾಷ್ಟ್ರೀಯ ಖ್ಯಾತಿಯ ಜರ್ನಲ್ ನಲ್ಲಿ ಲೇಖನ ಪ್ರಕಟವಾಗಿರುವುದ ಈ ಸಾಧನೆಗೆ ವಿವಿ ಕುಲಾಧಿಪತಿ ಎಂ. ಬಿ. ಪಾಟೀಲ, ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಕುಲಪತಿ ಪ್ರೊ. ಆರ್. ಎಸ್. ಮುಧೋಳ, ಸಮಕುಲಪತಿ ಪ್ರೊ. ಅರುಣ ಇನಾಮದಾರ, ರಜಿಸ್ಟ್ರಾರ್ ಡಾ. ರಾಘವೇಂದ್ರ ವಿ. ಕುಲಕರ್ಣಿ ಹಾಗೂ ಪ್ರಾಚಾರ್ಯ ಪ್ರೊ. ಅರವಿಂದ ಪಾಟೀಲ, ಅಲೈಡ್ ಹೆಲ್ತ್ ಸಾಯಿನ್ಸ್ ಡೀನ್ ಡಾ. ಎಸ್. ವಿ. ಪಾಟೀಲ ಅಭಿನಂದನೆ ಸಲ್ಲಿಸಿದ್ದಾರೆ.

Search
Popular News
Most Popular
ಬಿ.ಎಲ್.ಡಿ.ಇ ಸಂಸ್ಥೆ ಮತ್ತು ಅಲೆನ್ ಕರಿಯರ್ ಅಕಾಡೆಮಿ ಮಧ್ಯೆ ಶೈಕ್ಷಣಿಕ ಓರಿಯಂಟೇಶನ್ ಕಾರ್ಯಕ್ರಮದ ಕ್ಷಣಗಳು.
Vachana Pitamaha P. G. Halakatti College of Engineering
Nursing College Jamkhandi
BLDEA Nursing College Vijayapura
Vachana Pitamaha P. G. Halakatti College of Engineering Vijayapura
ಡಾ ಫ ಗು ಹಳಕಟ್ಟಿ, ಬಂಥನಾಳ ಶಿವಯೋಗಿಗಳು, ಡಾ ಬಿ ಎಂ ಪಾಟೀಲ್ ಹಾಗೂ ಬಂಗಾರಮ್ಮ ಸಜ್ಜನ ಅವರ ಸ್ಮರಣೆ ಕಾರ್ಯಕ್ರಮ

Leave a Comment