ಕೈಯೊಡ್ಡಿ ಪ್ರಸಾದವ ಕೊಂಡಡೆ ಕರ್ಮಧಾರಿ. ಶೇಷಪ್ರಸಾದವನಾಯ್ದು ಕೊಂಡಡೆ ವರ್ಮಹೀನ. ಉಕ್ಕುಳಪ್ರಸಾದವ ಕೊಂಡಡೆ ಸತ್ಕ್ರೀಗೆ ಸಲ್ಲ. ಇಂತಿವನರಿದು ಸಜ್ಜನಪ್ರಸಾದವ ನಿರ್ಧರದಿಂದ ಕೊಂಬ ಮಹಾಪ್ರಸಾದಿಯ ಕಾರುಣ್ಯವೆನಗೆಂದಿಗೆ ಸಾಧ್ಯವಪ್ಪುದು ? ಕುಂಭೇಶ್ವರಲಿಂಗದಲ್ಲಿ ಜಗನ್ನಾಥವವರಿದವಂಗಲ್ಲದೆ ಸಾಧ್ಯವಲ್ಲ
ರಾಜಕೀಯ Bagalkot

ಪ್ರಧಾನಮಂತ್ರಿ ಆವಾಸ ಯೋಜನೆಯಡಿ ಅನುದಾನ ಬಿಡುಗಡೆ, ವಸತಿರಹಿತರಿಗೆ ಅನುಕೂಲ ಕಲ್ಪಿಸುವಂತೆ ಸುನೀಲಗೌಡ ಪಾಟೀಲ ಪತ್ರದ ಮೂಲಕ ತಾ.ಪಂ ಅಧಿಕಾರಿಗಳಿಗೆ ನಿರ್ದೇಶನ.

by 1 on | 2024-10-01 19:29:52

Share: Facebook | Twitter | Whatsapp | Linkedin | Visits: 266


ಪ್ರಧಾನಮಂತ್ರಿ ಆವಾಸ ಯೋಜನೆಯಡಿ ಅನುದಾನ ಬಿಡುಗಡೆ, ವಸತಿರಹಿತರಿಗೆ ಅನುಕೂಲ ಕಲ್ಪಿಸುವಂತೆ ಸುನೀಲಗೌಡ ಪಾಟೀಲ ಪತ್ರದ ಮೂಲಕ ತಾ.ಪಂ ಅಧಿಕಾರಿಗಳಿಗೆ ನಿರ್ದೇಶನ.

ವಿಜಯಪುರ 1. ಪ್ರಧಾನಮಂತ್ರಿ ಆವಾಸ ಯೋಜನೆ 2024-25 ಅನುದಾನ ಬಿಡುಗಡೆ, ಜಿ.ಪಿ.ಎಸ್ ಮಾಡಿ, ಫಲಾನುಭವಿಗಳು ಮನೆ ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಿಕೊಡಲು ವಿಧಾನಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.


ಪತ್ರದಲ್ಲಿ ತಿಳಿಸಿದ ಅವರು, ವಿಜಯಪುರ ಜಿಲ್ಲೆಯ 13 ತಾಲೂಕುಗಳ ಗ್ರಾಮ ಪಂಚಾಯಿತಿಗಳಲ್ಲಿ ಮನೆಗಳ ನಿರ್ಮಾಣಕ್ಕೆ ಸರಕಾರ ಎಸ್.ಸಿ ಫಲಾನುಭವಿಗಳಿಗೆ ರೂ. 43,750 ಮತ್ತು ಇತರೆ ಫಲಾನುಭವಿಗಳಿಗೆ ರೂ. 30,000 ಅನುದಾನವನ್ನು ಫಲಾನುಭವಿಗಳಿಗೆ ಖಾತೆಗಳಿಗೆ ನೇರವಾಗಿ ಜಮೆ ಮಾಡುತ್ತಿದೆ. ಆದ್ದರಿಂದ ಕೂಡಲೇ ವಸತಿರಹಿತರಿಗೆ ಅನುಕೂಲ ಮಾಡಿಕೊಡಲು ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿ.ಡಿ.ಓ) ಗಳಿಗೆ ನಿರ್ದೇಶನ ನೀಡುವಂತೆ ತಿಳಿಸಿದ್ದಾರೆ. 


ಜಿಲ್ಲೆಯ ಆಲಮೇಲ ತಾಲೂಕಿನ 13 ಗ್ರಾ. ಪಂ ಗಳಲ್ಲಿ 511, ಬಬಲೇಶ್ವರ ತಾಲೂಕಿನ 16 ಗ್ರಾ. ಪಂ ಗಳಲ್ಲಿ 711, ಬಸವನ ಬಾಗೇವಾಡಿ ತಾಲೂಕಿನ 18 ಗ್ರಾ. ಪಂ ಗಳಲ್ಲಿ 1053, ಚಡಚಣ ತಾಲೂಕಿನ 13 ಗ್ರಾ. ಪಂ ಗಳಲ್ಲಿ 823, ದೇವರ ಹಿಪ್ಪರಗಿ ತಾಲೂಕಿನ 14 ಗ್ರಾ. ಪಂ ಗಳಲ್ಲಿ 840, ಇಂಡಿ ತಾಲೂಕಿನ 39 ಗ್ರಾ. ಪಂ ಗಳಲ್ಲಿ 1486, ಕೊಲ್ಹಾರ ತಾಲೂಕಿನ 10 ಗ್ರಾ. ಪಂ ಗಳಲ್ಲಿ 675, ಮುದ್ದೇಬಿಹಾಳ ತಾಲೂಕಿನ 22 ಗ್ರಾ. ಪಂ ಗಳಲ್ಲಿ 1307, ನಿಡಗುಂದಿ ತಾಲೂಕಿನ 11 ಗ್ರಾ. ಪಂ ಗಳಲ್ಲಿ 207, ಸಿಂದಗಿ ತಾಲೂಕಿನ 18 ಗ್ರಾ. ಪಂ ಗಳಲ್ಲಿ 457, ತಾಳಿಕೋಟಿ ತಾಲೂಕಿನ 14 ಗ್ರಾ. ಪಂ ಗಳಲ್ಲಿ 774, ತಿಕೋಟಾ ತಾಲೂಕಿನ 15 ಗ್ರಾ. ಪಂ ಗಳಲ್ಲಿ 771, ವಿಜಯಪುರ ತಾಲೂಕಿನ 17 ಗ್ರಾ. ಪಂ ಗಳಲ್ಲಿ 770 ಫಲಾನುಭವಿಗಳ ಖಾತೆಗೆ ನೇರವಾಗಿ ಯೋಜನೆಯ ಹಣ ಜಮೆ ಆಗುತ್ತಿದೆ. 


ಗ್ರಾ. ಪಂ. ಅಧಿಕಾರಿಗಳು ಈ ನಿಟ್ಟಿನಲ್ಲಿ ಕೂಡಲೇ ಜಿ.ಪಿ.ಎಸ್ ಮಾಡಿಸಿ, ವಸತಿರಹಿತ ಫಲಾನುಭವಿಗಳು ಮನೆ ಕಟ್ಟಿಕೊಳ್ಳುವಂತೆ ಮಾಹಿತಿ ನೀಡಲು ಕ್ರಮ ಕೈಗೊಳ್ಳಬೇಕು ಅಲ್ಲದೇ, ಜಿ.ಪಿ.ಎಸ್ ಮಾಡಿದ ಪ್ರತಿಯನ್ನು ವಿಧಾನ ಪರಿಷತ್ ಶಾಸಕರ ಕಚೇರಿಗೆ ಸಲ್ಲಿಸುವಂತೆ ಸುನೀಲಗೌಡ ಬಿ. ಪಾಟೀಲ ಅವರು ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.



Search
Popular News
Most Popular
ಬಿ.ಎಲ್.ಡಿ.ಇ ಸಂಸ್ಥೆ ಮತ್ತು ಅಲೆನ್ ಕರಿಯರ್ ಅಕಾಡೆಮಿ ಮಧ್ಯೆ ಶೈಕ್ಷಣಿಕ ಓರಿಯಂಟೇಶನ್ ಕಾರ್ಯಕ್ರಮದ ಕ್ಷಣಗಳು.
Vachana Pitamaha P. G. Halakatti College of Engineering
Nursing College Jamkhandi
BLDEA Nursing College Vijayapura
Vachana Pitamaha P. G. Halakatti College of Engineering Vijayapura
ಡಾ ಫ ಗು ಹಳಕಟ್ಟಿ, ಬಂಥನಾಳ ಶಿವಯೋಗಿಗಳು, ಡಾ ಬಿ ಎಂ ಪಾಟೀಲ್ ಹಾಗೂ ಬಂಗಾರಮ್ಮ ಸಜ್ಜನ ಅವರ ಸ್ಮರಣೆ ಕಾರ್ಯಕ್ರಮ

Leave a Comment