ಕೈಯೊಡ್ಡಿ ಪ್ರಸಾದವ ಕೊಂಡಡೆ ಕರ್ಮಧಾರಿ. ಶೇಷಪ್ರಸಾದವನಾಯ್ದು ಕೊಂಡಡೆ ವರ್ಮಹೀನ. ಉಕ್ಕುಳಪ್ರಸಾದವ ಕೊಂಡಡೆ ಸತ್ಕ್ರೀಗೆ ಸಲ್ಲ. ಇಂತಿವನರಿದು ಸಜ್ಜನಪ್ರಸಾದವ ನಿರ್ಧರದಿಂದ ಕೊಂಬ ಮಹಾಪ್ರಸಾದಿಯ ಕಾರುಣ್ಯವೆನಗೆಂದಿಗೆ ಸಾಧ್ಯವಪ್ಪುದು ? ಕುಂಭೇಶ್ವರಲಿಂಗದಲ್ಲಿ ಜಗನ್ನಾಥವವರಿದವಂಗಲ್ಲದೆ ಸಾಧ್ಯವಲ್ಲ
ಕ್ರೀಡೆ LOCAL SPORTS

ಸದೃಢವಾದ ಶರೀರದಲ್ಲಿ ಸದೃಢವಾದ ಮನಸ್ಸು ಇರುತ್ತದೆ

by 21 on | 2025-03-04 12:54:14 Last Updated by 21 on2026-04-18 18:10:24

Share: Facebook | Twitter | Whatsapp | Linkedin | Visits: 210


ಸದೃಢವಾದ ಶರೀರದಲ್ಲಿ ಸದೃಢವಾದ ಮನಸ್ಸು  ಇರುತ್ತದೆ

ವಿದ್ಯಾರ್ಥಿಗಳ ಶೈಕ್ಷಣಿಕ ಜೀವನ ಪೂರ್ಣಗೊಳ್ಳಬೇಕಾದರೆ ವಿದ್ಯಾರ್ಥಿಗಳು ಪಾಠದ ಜೊತೆಗೆ ಆಟಕ್ಕೂ ಮಹತ್ವ ಕೊಟ್ಟು ಮುನ್ನಡೆಯಬೇಕು ಆಗ ಮಾತ್ರ ಸದೃಢವಾದ ಶರೀರದಲ್ಲಿ ಸದೃಢವಾದ ಮನಸ್ಸನ್ನು ಹೊಂದಲು ಸಾಧ್ಯವೆಂದು ಪ್ರಾಚಾರ್ಯರಾದ ಡಾ. ಎ. ವಿ.ಸೂರ್ಯವಂಶಿ ಅವರು ಹೇಳಿದರು 

              ಪಟ್ಟಣದ ಬಿ ಎಲ್ ಡಿ ಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಇಂದು ನೆಹರು ಯುವ ಕೇಂದ್ರ ವಿಜಯಪುರ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ ಮತ್ತು ಅಲ್ ಅರಪಾತ್ ಯೂತ್ ವೆಲ್ಫೇರ್ ಸೊಸೈಟಿ ಬಸವನಬಾಗೇವಾಡಿಯ ಸಂಯುಕ್ತ ಆಶ್ರಯದಲ್ಲಿ 2024 25ರ ತಾಲೂಕ ಮಟ್ಟದ ಕ್ರೀಡಾಕೂಟದ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯ ಸ್ಥಾನವನ್ನು ವಹಿಸಿಕೊಂಡು ಮಾತನಾಡಿದ ಅವರು ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವವನ್ನು ಬೆಳೆಸಿಕೊಂಡು ನಿರಂತರವಾಗಿ ಶ್ರದ್ಧೆಯಿಂದ ಮುಂದುವರೆದರೆ ವಿಶ್ವಮಟ್ಟದ ಕ್ರೀಡಾಪಟುವಾಗಿ ದೇಶದ ಗೌರವವನ್ನು ಕಾಪಾಡಲು ಸಾಧ್ಯವೆಂದು ಅಭಿಪ್ರಾಯಪಟ್ಟರು.

         ನೆಹರು ಯುವ ಕೇಂದ್ರದ ವತಿಯಿಂದ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ಚಸ್, ಕೇರಂ, ಖೋಖೋ , ಕಬಡ್ಡಿ ಹಾಗೂ ಒಂದು 100 ಮೀಟರ್, 400 ಮೀಟರ್ ಓಟದ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು ಈ ಎಲ್ಲಾ ಆಟಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ತೋರ್ಪಡಿಸಿದರು.  ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು ವೇದಿಕೆಯ ಮೇಲೆ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಬಿ. ಎಮ್. ಸಾಲವಾಡಗಿ, ಆಯ್. ಕ್ಯೂ. ಎ. ಸಿ. ಮುಖ್ಯಸ್ಥರಾದ ದಿಲೀಪ್ ಕುಮಾರ್ ಎನ್ ವೈ ಪಿ ಎ ಮುಖ್ಯಸ್ಥರಾದ ಎಸ್ ಕೆ ಜಾಲವಾದಿ ಎಲ್ಎಸ್ ಜಮಖಂಡಿ ಉಪಸ್ಥಿತರಿದ್ದರು ಕಾರ್ಯಕ್ರಮದಲ್ಲಿ ಡಾ. ಎಸ್ ಬಿ ಜನಗೊಂಡ್, ಎಂ ಕೆ ಯಾದವ್, ಪಿ ಎಸ್ ನಾಟಿಕರ್  ಆರ್ ಎಂ ಮುಜಾವರ್, ಜಯರಾಮರೆಡ್ಡಿ ಹಾಗೂ ಎಲ್ಲಬಹುದೆತರ ಸಿಬ್ಬಂದಿಯವರು ಹಾಜರಿದ್ದರು. ಸಮಾಜಶಾಸ್ತ್ರದ ಮುಖ್ಯಸ್ಥರಾದ ಡಾ. ವೈ ಬಿ ನಾಯಕ್ ಅವರು ಕಾರ್ಯಕ್ರಮವನ್ನು ನಿರೂಪಿಸಿದರು

Search
Popular News
Most Popular
ಬಿ.ಎಲ್.ಡಿ.ಇ ಸಂಸ್ಥೆ ಮತ್ತು ಅಲೆನ್ ಕರಿಯರ್ ಅಕಾಡೆಮಿ ಮಧ್ಯೆ ಶೈಕ್ಷಣಿಕ ಓರಿಯಂಟೇಶನ್ ಕಾರ್ಯಕ್ರಮದ ಕ್ಷಣಗಳು.
Vachana Pitamaha P. G. Halakatti College of Engineering
Nursing College Jamkhandi
BLDEA Nursing College Vijayapura
Vachana Pitamaha P. G. Halakatti College of Engineering Vijayapura
ಡಾ ಫ ಗು ಹಳಕಟ್ಟಿ, ಬಂಥನಾಳ ಶಿವಯೋಗಿಗಳು, ಡಾ ಬಿ ಎಂ ಪಾಟೀಲ್ ಹಾಗೂ ಬಂಗಾರಮ್ಮ ಸಜ್ಜನ ಅವರ ಸ್ಮರಣೆ ಕಾರ್ಯಕ್ರಮ

Leave a Comment