by 21 on | 2025-03-04 12:54:14 Last Updated by 21 on2026-04-18 18:10:24
Share: Facebook | Twitter | Whatsapp | Linkedin | Visits: 210
ವಿದ್ಯಾರ್ಥಿಗಳ ಶೈಕ್ಷಣಿಕ ಜೀವನ ಪೂರ್ಣಗೊಳ್ಳಬೇಕಾದರೆ ವಿದ್ಯಾರ್ಥಿಗಳು ಪಾಠದ ಜೊತೆಗೆ ಆಟಕ್ಕೂ ಮಹತ್ವ ಕೊಟ್ಟು ಮುನ್ನಡೆಯಬೇಕು ಆಗ ಮಾತ್ರ ಸದೃಢವಾದ ಶರೀರದಲ್ಲಿ ಸದೃಢವಾದ ಮನಸ್ಸನ್ನು ಹೊಂದಲು ಸಾಧ್ಯವೆಂದು ಪ್ರಾಚಾರ್ಯರಾದ ಡಾ. ಎ. ವಿ.ಸೂರ್ಯವಂಶಿ ಅವರು ಹೇಳಿದರು
ಪಟ್ಟಣದ ಬಿ ಎಲ್ ಡಿ ಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಇಂದು ನೆಹರು ಯುವ ಕೇಂದ್ರ ವಿಜಯಪುರ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ ಮತ್ತು ಅಲ್ ಅರಪಾತ್ ಯೂತ್ ವೆಲ್ಫೇರ್ ಸೊಸೈಟಿ ಬಸವನಬಾಗೇವಾಡಿಯ ಸಂಯುಕ್ತ ಆಶ್ರಯದಲ್ಲಿ 2024 25ರ ತಾಲೂಕ ಮಟ್ಟದ ಕ್ರೀಡಾಕೂಟದ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯ ಸ್ಥಾನವನ್ನು ವಹಿಸಿಕೊಂಡು ಮಾತನಾಡಿದ ಅವರು ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವವನ್ನು ಬೆಳೆಸಿಕೊಂಡು ನಿರಂತರವಾಗಿ ಶ್ರದ್ಧೆಯಿಂದ ಮುಂದುವರೆದರೆ ವಿಶ್ವಮಟ್ಟದ ಕ್ರೀಡಾಪಟುವಾಗಿ ದೇಶದ ಗೌರವವನ್ನು ಕಾಪಾಡಲು ಸಾಧ್ಯವೆಂದು ಅಭಿಪ್ರಾಯಪಟ್ಟರು.
ನೆಹರು ಯುವ ಕೇಂದ್ರದ ವತಿಯಿಂದ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ಚಸ್, ಕೇರಂ, ಖೋಖೋ , ಕಬಡ್ಡಿ ಹಾಗೂ ಒಂದು 100 ಮೀಟರ್, 400 ಮೀಟರ್ ಓಟದ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು ಈ ಎಲ್ಲಾ ಆಟಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ತೋರ್ಪಡಿಸಿದರು. ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು ವೇದಿಕೆಯ ಮೇಲೆ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಬಿ. ಎಮ್. ಸಾಲವಾಡಗಿ, ಆಯ್. ಕ್ಯೂ. ಎ. ಸಿ. ಮುಖ್ಯಸ್ಥರಾದ ದಿಲೀಪ್ ಕುಮಾರ್ ಎನ್ ವೈ ಪಿ ಎ ಮುಖ್ಯಸ್ಥರಾದ ಎಸ್ ಕೆ ಜಾಲವಾದಿ ಎಲ್ಎಸ್ ಜಮಖಂಡಿ ಉಪಸ್ಥಿತರಿದ್ದರು ಕಾರ್ಯಕ್ರಮದಲ್ಲಿ ಡಾ. ಎಸ್ ಬಿ ಜನಗೊಂಡ್, ಎಂ ಕೆ ಯಾದವ್, ಪಿ ಎಸ್ ನಾಟಿಕರ್ ಆರ್ ಎಂ ಮುಜಾವರ್, ಜಯರಾಮರೆಡ್ಡಿ ಹಾಗೂ ಎಲ್ಲಬಹುದೆತರ ಸಿಬ್ಬಂದಿಯವರು ಹಾಜರಿದ್ದರು. ಸಮಾಜಶಾಸ್ತ್ರದ ಮುಖ್ಯಸ್ಥರಾದ ಡಾ. ವೈ ಬಿ ನಾಯಕ್ ಅವರು ಕಾರ್ಯಕ್ರಮವನ್ನು ನಿರೂಪಿಸಿದರು
ಕ್ರೈಂ ಥ್ರಿಲ್ಲರ್ “ಕಲುಷ” ಟೀಸರ್ ಬಿಡುಗಡೆ ಇದೇ ಮಾರ್ಚ್ 23
ಕಲುಷ ಕನ್ನಡ ಚಲನಚಿತ್ರ
ಪಿಜಿ ವಿಭಾಗದಲ್ಲಿ ಸಂಶೋಧನಾ ವಿಷಯಕ್ಕೆ ಸಂಬಂಧಿಸಿದ ವಿಶೇಷ ಉಪನ್ಯಾಸ ಕಾರ್ಯಕ್ರಮ
ಜಮಖಂಡಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂಭ್ರಮ
ಸ್ವಚ್ಛತೆಯೇ ಆರೋಗ್ಯಕ್ಕೆ ಅಡಿಪಾಯ: ಸುನಿಲ್ ರಾಟೋಡ್
ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಆಚರಿಸಲಾಯಿತು
ಶಿಕ್ಷಕನಿಗೆ ಬಹುಮುಖದ ವ್ಯಕ್ತಿತ್ವ ಇರಬೇಕು
ಪ್ರಶಿಕ್ಷಣಾರ್ಥಿಗಳ ಕಾರ್ಯಗಾರ ಕಾರ್ಯಕ್ರಮ